ಶಿವಮೊಗ್ಗ: ನಗರದ ಬಿ.ಹೆಚ್. ರಸ್ತೆಯ ಆಲ್ಕೊಳ ವೃತ್ತದ ಶ್ರೀಗಂಧ ಚಾಮುಂಡೇಶ್ವರಿ ದೇವಾಲಯ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬೀದಿಬದಿ ವ್ಯಾಪರಸ್ಥರಿಂದ ಹಮ್ಮಿಕೊಳ್ಳಲಾದ ಸ್ವಚ್ಛತಾ ಸಪ್ತಾಹ ಆಂದೋಲನಕ್ಕೆ ಜಿಲ್ಲಾಧ್ಯಕ್ಷರಾದ ಚನ್ನವೀರಪ್ಪ ಗಾಮನಗಟ್ಟಿ ಅವರು ಸ್ವಚ್ಛತೆಗೊಳಿಸಿ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛತೆಯಿಂದ ಇಡಬೇಕು. ದೇಶದ ತಾಪಮಾನ ದಿನೆ ದಿನೇ ಹೆಚ್ಚುತ್ತಿದೆ. ಪ್ರತಿಯೊಬ್ಬ ನಾಗರಿಕರು ಒಂದೊAದು ಗಿಡ ನೆಡಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ನಗರದ ನಾಗರಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವುದು ಹಾಗೂ ಪರಿಸರದ ಬಗ್ಗೆ ಒಲವು ಮೂಡಿಸುವ ಕಾರ್ಯ ಬೀದಿಬದಿ ವ್ಯಾಪಾರಸ್ಥರು ಮಾಡಬೇಕು ಎಂದರು.
ದೇವಾಲಯದ ಆವರಣ ಸ್ವಚ್ಛಗೊಳಿಸಿ ಸಂಗ್ರಹವಾದ ಕಸದಿಂದ ಪ್ಲಾಸ್ಟಿಕ್ ಬೇರ್ಪಡಿಸಿ ಗೊಬ್ಬರವಾಗಲು ಗಿಡಗಳ ಬುಡದಲ್ಲಿ ಕಸದ ರಾಶಿ ಹಾಕಲಾಯಿತು. ಈ ಸಂದರ್ಭದಲ್ಲಿ ಸಂಪಿಗೆ, ಬಾದಾಮಿ, ಹೊಂಗೆಯ ಗಿಡಗಳನ್ನು ಆವರಣದಲ್ಲಿ ನೆಡಲಾಯಿತು. ಈ ಕಾರ್ಯಕ್ರಮದಲ್ಲಿ ಟಿವಿಸಿ ಸದಸ್ಯರಾದ ವಿನಯ್ ಕುಮಾರ್, ಬಾಬು, ಗೋಪಾಲ್, ಅವಿನಾಶ್, ರವಿ, ಚಂದ್ರು, ನೇತ್ರಾವತಿ, ವಾರ್ಡ್ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಸದಸ್ಯರು, ಸಂಘದ ಪದಾಧಿಕಾರಿಗಳು ಹಾಗೂ ಬೀದಿಬದಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.