ಶಿವಮೊಗ್ಗ : ಗಣರಾಜ್ಯೋತ್ಸವ ದಿನಾಚರಣೆಯಂದು ರಾಯಚೂರು ಕೋರ್ಟ್ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಂದು ಅಲ್ಲಿನ ನ್ಯಾಯಾಧೀಶರು, ಅಂಬೇಡ್ಕರ್ ಫೋಟೋ ಇಟ್ಟರೆ ನಾನು ಧ್ಯಜಾರೋಹಣ ಮಾಡುವುದಿಲ್ಲ ಎಂದು ಹೇಳಿ, ಅಂಬೇಡ್ಕರ್ ಅವರ ಫೋಟೋ ತೆಗೆಸಿರುವ ಘಟನೆಯನ್ನ ಕರ್ನಾಟಕ ದಲಿತ ಸಂಘರ್ಷ ಸಮಿತಿ ಖಂಡಿಸಿದೆ.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಡಿಎಸ್ಎಸ್ನ ರಾಜ್ಯ ಸಂಚಾಲಕ ಗುರುಮೂರ್ತಿ, ಅಂಬೇಡ್ಕರ್ಗೆ ಅಗೌರವ ತೋರಿರುವ ಈ ನ್ಯಾಯಾಧೀಶರನ್ನ ತಕ್ಷಣವೇ ಸೇವೆಯಿಂದ ವಜಾಗೊಳಿಸಬೇಕು. ಇವರ ವಿರುದ್ಧ ಪರಿಶಿಷ್ಟ ಜಾತಿ ಆಥವಾ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಬೇಕು. ರಾಷ್ಟ್ರ ನಾಯಕನಾಗಿರುವ ಅಂಬೇಡ್ಕರ್ಗೆ ಅವಮಾನ ಮಾಡಿರುವುದರಿಂದಾಗಿ ಇವರ ಮೇಲೆ ದೇಶದ್ರೋಹ ಕೇಸನ್ನ ಕೂಡ ದಾಖಲಿಸಬೇಕೆಂದು ಆಗ್ರಹಿಸಿದರು.
.jpg)
.jpg)
.jpg)
.jpg)
.jpg)
.jpg)
