ಬೆಂಗಳೂರು : ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕರ ಹೋರಾಟ ಶುಕ್ರವಾರವೂ ಮುಂದುವರಿಯಿತು. ಅಧಿವೇಶನ ಆರಂಭವಾಗುತ್ತಿದ್ದಂತೆ ಸದನದ ಬಾವಿಗೆ ಇಳಿದು ಸಚಿವ ಈಶ್ವರಪ್ಪರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಶಾಸಕರು ಘೋಷಣೆ ಕೂಗಿ, ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವೇಳೆ ಸ್ಪೀಕರ್ ಕಾಗೇರಿ ಅವರು ಹೋರಾಟ ಕೈಬಿಡುವಂತೆ ಮನವಿ ಮಾಡಿದರು. ಸಿಎಂ ಬಸವರಾಜ ಬೊಮ್ಮಾಯಿ ಮಾತಾಡಿ, ರಾಜ್ಯದಲ್ಲಿ ಗಂಭೀರ ಸಮಸ್ಯೆಗಳು ಇವೆ. ಅವುಗಳ ಬಗ್ಗೆ ಚರ್ಚೆ ಮಾಡಬೇಕು. ಶಾಲಾ - ಕಾಲೇಜುಗಳಲ್ಲಿ ಹಿಜಾಬ್ ವಿವಾದ ಇದೆ. ಹೈಕೋರ್ಟ್ನಲ್ಲಿ ಪ್ರಕರಣ ನಡೀತಾ ಇದೆ. ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಹೋಗ್ತಾ ಇಲ್ಲ. ಅಂತಹ ವಿಷ್ಯಗಳ ಕುರಿತು ಚರ್ಚೆ ನಡೆಸಿ, ನಿರ್ಣಯ ಕೈಗೊಳ್ಳಬೇಕಾದ ನಾವು ಹೀಗೆ ಸದನದ ಕಾಲ ಹರಣ ಮಾಡಿದ್ರೆ ಹೇಗೆ ಎಂದು ಪ್ರಶ್ನೆ ಮಾಡಿದ್ರು.
.jpg)
.jpg)
.jpg)
.jpg)
.jpg)
.jpg)
