ಸಾಗರ : ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಮರಳು ಲಾರಿ ಮಾಲೀಕರಿಂದ ಕಮೀಷನ್ ಪಡೆದಿದ್ದಾರೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ನಾನು ಸಿದ್ಧನಿದ್ದೇನೆ. ತಾಕತ್ತಿದ್ದರೆ ಹಾಲಪ್ಪನವರು ಕಮೀಷನ್ ತೆಗೆದುಕೊಂಡಿಲ್ಲವೆಂದು ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸಾವಾಲ್ ಹಾಕಿದ್ದಾರೆ.
ಸಾಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಶಾಸಕರು ಲಾರಿ ಮಾಲೀಕರನ್ನು ಮನೆಗೆ ಕರೆಸಿ ನೀವು ಬೇಳೂರು ವಿರುದ್ಧ ಪತ್ರಿಕಾ ಹೇಳಿಕೆ ನೀಡದಿದ್ದರೆ ನಿಮಗೆ ಆಕ್ರಮವಾಗಿ ಮರಳು ಹೊಡೆಯಲು ಬೀಡುವುದಿಲ್ಲ ಎಂದು ತಾಕೀತು ಮಾಡಿದ್ದಾರೆ. ಹೀಗಾಗಿ ಶಾಸಕರಿಗೆ ಹೆದರಿ ಆಕ್ರಮ ಮರುಳು ದಂಧೆ ಮಾಡುವವರು ನನ್ನ ವಿರುದ್ಧ ಪತ್ರಿಕಾ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.