ಶಿವಮೊಗ್ಗ : ಸ್ವಾತಂತ್ರ್ಯ ಹೋರಾಟಗಾರ ಹಾಗೂ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದ ದಿವಂಗತ ಬಿ.ಎಸ್.ರಾಮಭಟ್ಟರ ಸಮಗ್ರ ಸಾಹಿತ್ಯ ಗೊಂಚಲು ಕೃತಿ ಲೋಕಾರ್ಪಣೆಯಾಗಿದೆ.
ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಕ್ಕಿನಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಜಿ ಕೃತಿ ಬಿಡುಗಡೆ ಮಾಡಿದರು. ಮುಖ್ಯ ಅತಿಥಿಗಳಾಗಿ ಇತಿಹಾಸ ಉಪನ್ಯಾಸಕ ಡಾ.ಎಸ್.ಜಿ.ಸಾಮಕ್ ಹಾಗೂ ಇತಿಹಾಸ ಸಂಶೋಧಕ ಡಾ.ಕೆಳದಿ ವೆಂಕಟೇಶ ಜೋಯಿಸ್ ಆಗಮಿಸಲಿದ್ದರು. ಅಂದ್ಹಾಗೆ, ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರ್ರಾಜ್ ಪ್ರಧಾನ ಸಂಪಾದಕತ್ವದಲ್ಲಿ ಈ ಗೊಂಚಲು ಕೃತಿ ಮೂಡಿ ಬಂದಿದೆ.