ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ನಗರದ ಹಲವೆಡೆ ದಾಳಿ ನಡೆಸಿದ್ದಾರೆ. ಶಿವಮೊಗ್ಗಕ್ಕೆ ಎನ್ಐಎ ಅಧಿಕಾರಿಗಳು ಬುಧವಾರ ರಾತ್ರಿ ಬಂದಿಳಿದಿದ್ದರು. ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಜಿಲ್ಲೆಗೆ ಆಗಮಿಸಿದೆ. ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು ೯೦ ಅಧಿಕಾರಿಗಳಿಂದ ದಾಳಿ ನಡೆದಿದೆ.
ಶುಕ್ರವಾರ ಬೆಳಗ್ಗೆ ಐದು ಗಂಟೆಗೆ ದಾಳಿ ಆರಂಭವಾಯಿತು. ಶಿವಮೊಗ್ಗ ಜಿಲ್ಲೆಯಲ್ಲಿ ೧೩ ಕಡೆ ದಾಳಿ ನಡೆಸಿ ವಿಚಾರಣೆ ಮಾಡಲಾಯಿತು. ಬೆಳಗ್ಗೆ ೧೦ ಗಂಟೆಯೊಳಗೆ ವಿಚಾರಣೆ ಮುಗಿಸಿ ವಾಪಸ್ ಆಗಿದ್ದಾರೆ. ಹರ್ಷ ಕೊಲೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಆರೋಪಿಗಳು ಹಾಗೂ ಅವರ ಸಂಬಂಧಿಕರ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ.
ಇದುವರೆಗೆ ಒಟ್ಟು ೪೫೦ ಮಂದಿಯನ್ನು ಎನ್ಐಎ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಅಂದ್ಹಾಗೆ ಕಳೆದ ಫೆಬ್ರವರಿ ೨೧ ರಂದು ದು ಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಹರ್ಷ ಪ್ರಕರಣವನ್ನು ರಾಜ್ಯ ಸರ್ಕಾರ ಎನ್ಐಎಗೆ ವಹಿಸಿತ್ತು.
.jpg)
.jpg)
.jpg)
.jpg)
.jpg)
.jpg)
