ಶಿವಮೊಗ್ಗ : ಜೂನ್ 12 ರಂದು ಆರ್ಯವೈಶ್ಯ ಸಂಸ್ಕೃತಿ ಭವನದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಹಾಗೂ ಆರ್ಯವೈಶ್ಯ ಮಹಾಜನ ಸಮಿತಿ ಅಧ್ಯಕ್ಷ ಡಿ.ಎಸ್.ಅರುಣ್, ದೇವರಾಜ್ ಅರಸ್ ಬಡಾವಣೆಯಲ್ಲಿ ನಿರ್ಮಾಣವಾಗಿರುವ ಈ ಭವನದಲ್ಲಿ 20 ಕ್ಕೂ ಹೆಚ್ಚು ರೂಂಗಳ ವ್ಯವಸ್ಥೆ ಮಾಡಲಾಗಿದೆ.
ಸಭೆಗಳನ್ನು ನಡೆಸಲು ಕೂಡ ಅನುಕೂಲವಾಗುವಂತೆ ಭವನದ ನಿರ್ಮಾಣ ಮಾಡಲಾಗಿದೆ. ಜೊತೆಗೆ ಸಂಪೂರ್ಣ ಭವನಕ್ಕೆ ಎಸಿ ವ್ಯವಸ್ಥೆ ಕಲ್ಪಿಸಲಾಗಿದೆ. 400 ಜನರು ಭವನದಲ್ಲಿ ಕೂರಲು ಸ್ಥಳಾವಕಾಶವಿದ್ದು, 1000ಕ್ಕೂ ಹೆಚ್ಚು ಮಂದಿ ಒಟ್ಟಿಗೆ ಕೂರುವಂತಹ ಊಟದ ಹಾಲ್ ಇದೆ ಎಂದು ತಿಳಿಸಿದರು.