ಎರಡು ದಿನ ಮಾಂಸ ಮಾರಾಟ ಬಂದ್ 

ಶಿವಮೊಗ್ಗ :  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ಮಾಂಸ ಮಾರಾಟ ನಿಷೇಧಿಸಲಾಗಿದೆ. ಏಪ್ರಿಲ್ 10ರಂದು ಶ್ರೀರಾಮ ನವಮಿ ಹಾಗೂ ಏಪ್ರಿಲ್ 14ರಂದು ಮಹಾವೀರ ಜಯಂತಿ ಹಾಗೂ ಅಂಬೇಡ್ಕರ್ ಜಯಂತಿಯಿದೆ.

ಆದ್ದರಿಂದ ಈ ಎರಡು ದಿನಾಂಕಗಳಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಮಾಂಸ ಮಾರಾಟಗಾರರು ಆಯಾ ದಿನಾಂಕಗಳಂದು ಮಾರಾಟ ಬಂದ್ ಮಾಡಿ ಸಹಕರಿಸಬೇಕು. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.